ಮಸ್ಕಿ, ಸೆ.21 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು, ಯಾದಗಿರಿ-ಮಸ್ಕಿ ಉಸ್ತುವಾರಿಗಳು ಹಾಗೂ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ರವರ 46 ನೇ ವರುಷದ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು, ಯಾದಗಿರಿ-ಮಸ್ಕಿ ಉಸ್ತುವಾರಿಗಳು ಹಾಗೂ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ರವರ ಹುಟ್ಟು ಹಬ್ಬವನ್ನು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಬೃಹತ್ ಹಾರವನ್ನು ಕ್ರೇನ್ ಸಹಾಯದಿಂದ ಮಲ್ಲಿಕಾರ್ಜುನ ಪಾಟೀಲರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಕಿ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕಾಂಗ್ರೇಸ್ ಕಛೇರಿಗೆ ತೆರಳಿ ನೂರಾರು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ 46 ನೇ ವರುಷದ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ
ಸಿದ್ದನಗೌಡ ತುರುವಿಹಾಳ,ಹನುಮಂತಪ್ಪ ಮುದ್ದಾಪುರ ಬ್ಲಾಕ್ ಕಾಂಗ್ರೇಸ್ ಗ್ರಾಮೀಣ ಘಟಕದ ಅಧ್ಯಕ್ಷರು, ರವಿಕುಮಾರ ಮಡಿವಾಳ, ಮಲ್ಲಯ್ಯ ಮುರಾರಿ ಬ್ಲಾಕ್ ಕಾಂಗ್ರೇಸ್ ಎಸ್ಸಿ ಘಟಕದ ಅಧ್ಯಕ್ಷರು ಮಸ್ಕಿ, ಮಹಿಬೂಬ್ ಸಂತೇ ಬಜಾರ್, ಇಬ್ರಾಹಿಂ ಮೆದಿಕಿನಾಳ ಕಾಂಗ್ರೇಸ್ ಕಾರ್ಯಕರ್ತ, ವೀರಭದ್ರಿ ಕೊಠಾರಿ ಎನ್. ಎಸ್. ಯು. ಐ ಅಧ್ಯಕ್ಷರು ಮಸ್ಕಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕಾಂಗ್ರೇಸ್ ಕಾರ್ಯಕರ್ತರು ಸೇರಿದಂತೆ ಅಭಿಮಾನಿಗಳು ಇದ್ದರು.
ಕ್ಷಣ ಕ್ಷಣದ ಸುದ್ದಿ ಕೆಳಗಿನ ಜನಸ್ಪಂದನ ವಾಟ್ಸಾಪ್ ಗುಂಪಿನ ಲಿಂಕ್ ಬಳಸಿರಿ.
https://chat.whatsapp.com/EnPflH1YdrTKgr8itRlTe9
ಸುದ್ಧಿಯ ಲಿಂಕ್ ಓಪನ್ ಆಗದಿದ್ದರೆ *'9008329745'* ನಂಬರನ್ನು *'UDAYAVANI. NEWS'* ಎಂದು ಸೇವ್ ಮಾಡಿಕೊಳ್ಳಿ.