ಬಸವಾಸಾಗರ ಆಣೆಕಟ್ಟು ಜಲಾಶಯದಿಂದ ಹೊರ ಹರಿವು 8 ಸಾವಿರ ಕ್ಯೂಸೆಕ್ ಬಿಡುಗಡೆ.

Udayavani News
0
ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ ಜಲಾಶಯದ ಗರಿಷ್ಠ ಎತ್ತರದಲ್ಲಿ 491.5 ಮೀಟರ್‌ವರೆಗೂ ನೀರು ಸಂಗ್ರಹಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ, ಒಳಹರಿವು ಇನ್ನು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶನಿವಾರ ಬೆಳಗ್ಗೆವರೆಗೆ 10 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತದೆ, ಹೀಗಾಗಿ ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ನದಿಗೆ ಇಳಿಯದಂತೆ

ಯಾವುದೇ ಚಟುವಟಿಕೆ ನಡೆಸದಂತೆ ಕೆಬಿಜೆಎನ್ ಎಲ್ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ರಮೇಶ ರಾಠೋಡ ಮಾಹಿತಿ ನೀಡಿದ್ದಾರೆ.

ಇಇ ಹಣಮಂತ ಕೊಣ್ಣೂರ, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಅರ್ಚಕ ರಾಘವೇಂದ್ರ ಆಚಾರ್ಯ, ಎಇಗಳಾದ ವಿಜಯ ಅರಳಿ, ಬಾಲಸುಭ್ರಮಣ್ಯಂ, ವಿರೇಶ, ಮಲ್ಲಿಕಾರ್ಜುನ, ಸುಮೀತ, ಬಾಲಚಂದ್ರ,

ಹಣಮಂತ, ಸಿದ್ದು ವಡವಡಗಿ, ವಿರೇಶ ಮತ್ತಿತರರಿದ್ದರು.

ಜಲಾಶಯದ ಮಟ್ಟ: ಜಲಾಶಯದ ಗರಿಷ್ಠ ಮಟ್ಟ

492.25ಮೀ.ನಲ್ಲಿ ಇಂದು 490.99 ಮೀಟರ್ಗೆ ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿ ಗಳಲ್ಲಿ 27.80 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಒಳಹರಿವು 20ಸಾವಿರ ಕ್ಯೂಸೆಕ್ ಇದ್ದರೆ, ಹೊರ ಹರಿವು 8 ಸಾವಿರ ಕ್ಯೂಸೆಕ್ ಇದೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Post a Comment

0Comments

Post a Comment (0)